• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಪುತ್ತೂರು: ಸಿಂಗಾಣಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

    15/08/2022 : 11:10 AM

    ಮಂಗಳೂರಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ; ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    15/08/2022 : 10:19 AM

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಾಟಿಂಗ್ ಮಾಡುತ್ತಿದ್ದ ಯುವಕ – ಯುವತಿಯ ತೀವ್ರ ತಪಾಸಣೆ

    14/08/2022 : 7:01 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಆ ಸಂಭ್ರಮದ ದಿನಗಳು ಇನ್ನೆಲ್ಲಿ…

    23/09/2022 : 10:11 PM

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM
  • ಗ್ಯಾಲರಿ
CitizenLive News
Home » ಸಿ - ಸ್ಪೆಶಲ್ » ಬೇಸಿಗೆ ಕಾಲದಲ್ಲಿ ಆರೋಗ್ಯ ಕೆಡದಿರಲು ಈ ನೈಸರ್ಗಿಕ ಪಾನೀಯಗಳನ್ನು ಕುಡಿಯಿರಿ..
ಸಿ - ಸ್ಪೆಶಲ್

ಬೇಸಿಗೆ ಕಾಲದಲ್ಲಿ ಆರೋಗ್ಯ ಕೆಡದಿರಲು ಈ ನೈಸರ್ಗಿಕ ಪಾನೀಯಗಳನ್ನು ಕುಡಿಯಿರಿ..

News EditorBy News Editor28/04/2022 : 12:29 PMUpdated:28/04/2022 : 12:29 PMNo Comments2 Mins Read

ಬಿಸಿಲ ಝಳಕ್ಕೆ ದೇಹದಲ್ಲಿ ಬೆವರುವಿಕೆ ಸಮಸ್ಯೆ ಅತಿಯಾಗಿ ಕಂಡು ಬರುವುದರಿಂದ, ದೇಹದಲ್ಲಿ ನೀರಿನಾಂಶ ಕೊರತೆ ಉಂಟಾಗಿ, ನಿರ್ಜಲೀಕರಣ ಸಮಸ್ಯೆ ಕೂಡ ಕಂಡು ಬರಲು ಶುರುವಾಗುತ್ತದೆ. ಆದರೆ ಈ ಸಮಯದಲ್ಲಿ ಮನಸ್ಸು ಕೃತಕ ಸಿಹಿ ಅಂಶ ಇರುವ ತಂಪು ಪಾನೀಯ ಗಳ ಕಡೆಗೆ ಹೆಚ್ಚು ಒಲವು ತೋರುವುದರಿಂದ, ಆದಷ್ಟು ಇದರಿಂದ ದೂರವಿದ್ದು, ಕೆಲವೊಂದು ನೈಸರ್ಗಿಕ ಪಾನೀಯಗಳನ್ನು ಸೇವನೆ ಮಾಡುವುದು ಆರೋಗ್ಯದ ದೃಷ್ಟಿಯಿಂದ ತುಂಬಾನೇ ಒಳ್ಳೆಯದು.

ಜೀರಿಗೆ ನೀರು:

  • ಪ್ರತಿನಿತ್ಯದ ಅಡುಗೆಯಲ್ಲಿ ಬಳಸುವ ಈ ಜೀರಿಗೆಯ ಆರೋಗ್ಯ ಪ್ರಯೋಜನಗಳ ಬಗ್ಗೆ ಹೆಚ್ಚು- ಕಮ್ಮಿ ಎಲ್ಲರಿಗೂ ಗೊತ್ತೇ ಇದೆ. ದೇಹವನ್ನು ತಂಪಾಗಿಡುವ ಎಲ್ಲಾ ಗುಣ ಲಕ್ಷಣಗಳನ್ನು ಹೊಂದಿರುವ ಈ ಪುಟ್ಟ ಕಾಳಿನಲ್ಲಿ, ಕೆಲ ವೊಂದು ಬಗೆಯ ಅನಾರೋಗ್ಯವನ್ನು ದೂರವಿಡುವ ಎಲ್ಲಾ ಗುಣಲಕ್ಷಣಗಳು ಕೂಡ ಇದರಲ್ಲಿ ಕಂಡುಬರುತ್ತದೆ.
  • ತನ್ನಲ್ಲಿ ಹೇರಳವಾಗಿ ನಾರಿನಾಂಶವನ್ನು ಹೊಂದಿರುವ ಈ ಪುಟ್ಟಕಾಳು, ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ಅಚ್ಚುಕ ಟ್ಟಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ. ಆಯುರ್ವೇದದಲ್ಲಿ ಕೂಡ ಇದೊಂದು ಆರೋಗ್ಯಕಾರಿ ಪಾನೀಯ ಎಂದು ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ.

ಮಜ್ಜಿಗೆ:

  • ಹಾಲಿನ ಉತ್ಪನ್ನಗಳನ್ನು ಪ್ರತಿನಿತ್ಯದ ನಮ್ಮ ಆಹಾರಕ್ರಮದಲ್ಲಿ ಸೇರಿಸಿಕೊಂಡು ಬಂದರೆ, ಅದರಿಂದ ದೇಹವು ತಂಪಾಗಿ ಇರುವುದರ ಜೊತೆಗೆ ಆರೋಗ್ಯಕ್ಕೆ ಕೂಡ ಹಲವಾರು ರೀತಿಯ ಆರೋಗ್ಯ ಕಾರಿ ಲಾಭಗಳು ಸಿಗುತ್ತವೆ, ಎಂದು ಆಯುರ್ವೇದವು ಹೇಳುತ್ತದೆ. ಅದರಲ್ಲೂ ಹಾಲು, ಮೊಸರು ಹಾಗೂ ಮಜ್ಜಿಗೆಯನ್ನು ನಿಯಮಿತವಾಗಿ, ದಿನಾ ಸೇವಿಸುತ್ತಾ ಬಂದರೆ, ಅದರಿಂದ ಆರೋಗ್ಯಕ್ಕೆ ಹಲವಾರು ರೀತಿಯ ಪ್ರಯೋಜನಗಳನ್ನು ನಿರೀಕ್ಷಿಸಬಹುದಾಗಿದೆ.
  • ಪ್ರತಿದಿನ ಊಟದ ಬಳಿಕ, ದಿನ ಕ್ಕೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಇಟ್ಟು ಕೊಂಡರೆ, ಜೀರ್ಣ ಕ್ರಿಯೆ ಪ್ರಕ್ರಿಯೆಯು, ಅಚ್ಚುಕಟ್ಟಾಗಿ ಕಾರ್ಯ ನಿರ್ವಹಣೆ ಆಗುವುದು ಮಾತ್ರವಲ್ಲದೆ, ಬೇಸಿಗೆ ಯಲ್ಲಿ ಅತಿಯಾಗಿ ಕಾಡುವ ಸೆಕೆ ಅಥವಾ ಉಷ್ಣತೆ ಇರುವ ಸಂದರ್ಭದಲ್ಲಿ ಇದು ದೇಹಕ್ಕೆ ಶಮನ ನೀಡುವುದು.

ಎಳನೀರು:
ಎಳನೀರು ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳಾದ, ವಿಟಮಿನ್ ಸಿ, ಕಾಲ್ಸಿಯಂ, ಮೆಗ್ನೇಶಿಯಂ, ಪೊಟ್ಯಾಶಿಯಂ ಮತ್ತು ಸೋಡಿಯಂ ಅಂಶಗಳು ಹಾಗೂ ಇತರ ಬಗೆಯ ಖನಿಜಾಂಶಗಳು, ಆರೋಗ್ಯವನ್ನ ಕಾಪಾಡುವುದರ ಜೊತೆಗೆ, ಬೇಸಗೆಯಲ್ಲಿ ದೇಹಕ್ಕೆ ಎಲೆಕ್ಟ್ರೋಲೈಟ್ಸ್‌ನಂತೆ, ಕಾರ್ಯ ನಿರ್ವಹಿಸಿ ನಿರ್ಜಲೀಕರಣ ವಾಗದಂತೆ ತಡೆಯುವುದು.

ಕಬ್ಬಿನ ಹಾಲು:
ಬಿರು ಬಿಸಿಲಿಗೆ ದೇಹದ ಉಷ್ಣತೆಯನ್ನು ಕಡಿಮೆ ಮಾಡಿ, ದೇಹಕ್ಕೆ ತಂಪುಣಿಸುವ ಮೊತ್ತೊಂದು ಪಾನೀಯ ಎಂದರೆ ಅದು ಕಬ್ಬಿನ ಹಾಲು. ಬೇಸಿಗೆಯಲ್ಲಿ ಉರಿ ಬಿಸಿಲಿನಿಂದಾಗಿ ಕಾಡುವ ನಿರ್ಜಲೀ ಕರಣ ಸಮಸ್ಯೆಗೆ ಕಬ್ಬಿನ ಹಾಲು ಅಥವಾ ಕಬ್ಬಿನ ಜ್ಯೂಸ್, ಒಂದು ಒಳ್ಳೆಯ ಪಾನೀಯ ಎಂಬುದರಲ್ಲಿ ಎರಡು ಮಾತಿಲ್ಲ. ಅಲ್ಲದೆ ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಕಬ್ಬಿಣಾಂಶ, ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಇತರ ಎಲೆಕ್ಟ್ರೋಲೈಟ್‌ಗಳು, ಈ ಪಾನೀಯದಲ್ಲಿ ಸಮೃದ್ಧ ಪ್ರಮಾಣದಲ್ಲಿ ಕಂಡುಬರುವುದರಿಂದ, ಕಿಡ್ನಿಸ್ಟೋನ್, ಜೀರ್ಣ ಕ್ರಿಯೆ ಸಮಸ್ಯೆ, ಅಥವಾ ಇತರ ಬಗೆಯ ಸೋಂಕುಗಳ ವಿರುದ್ಧ ಹೋರಾಡುವಲ್ಲಿ ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಇದಕ್ಕಾಗಿ ಎರಡು ಟೇಬಲ್ ಚಮಚ ಆಗುವಷ್ಟು ಜೀರಿಗೆಯನ್ನು ರಾತ್ರಿ ಪೂರ್ತಿ ನೆನೆಸಿಟ್ಟು, ಮರುದಿನ ಕೊಂಚ ಬೆಲ್ಲ ಸೇರಿಸಿ, ಬಾಯಾರಿಕೆ ಆದಾಗ ಕುಡಿಯುತ್ತಾ ಬಂದರೆ, ದೇಹವು ತಂಪಾಗಿರುವುದು, ಆರೋಗ್ಯಕ್ಕೂ ಒಳ್ಳೆಯದು.

ಕಲ್ಲಂಗಡಿ:
ಬೇಸಿಗೆಯ ಸಮಯದಲ್ಲಿ ನೀರಿನಾಂಶ ಅಧಿಕವಾಗಿ ಇರುವ ಹಣ್ಣುಗಳನ್ನು ಸೇವನೆಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರಲ್ಲೂ ಕಲ್ಲಂಗಡಿ ಹಣ್ಣಿನಲ್ಲಿ ಶೇ. 92ರಷ್ಟು ನೀರಿನಾಂಶ ಇರುವುದರಿಂದ, ದೇಹವನ್ನು ಹೈಡ್ರೇಟ್ ಆಗಿಡುವುದು ಮಾತ್ರವಲ್ಲದೆ, ಆರೋಗ್ಯವನ್ನು ಕಾಪಾಡುವುದು.. ಹೀಗಾಗಿ ಬೇಸಿಗೆ ಆದಷ್ಟು, ಈ ಹಣ್ಣಿನ ಜ್ಯೂಸ್ ಮಾಡಿ ಕುಡಿಯುವುದರಿಂದ ಕೂಡ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

Share. Facebook Twitter Pinterest LinkedIn Tumblr Email
Previous Articleಕುಂದಾಪುರ: ಆಪರೇಷನ್‌ ಚೀತಾ ಕಾರ್ಯಾಚರಣೆ ಯಶಸ್ವಿ – ಹೆಣ್ಣು ಚಿರತೆ ಸೆರೆ
Next Article ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿದೆ ಶಿಲಾಯುಗದ ಬೃಹತ್‌ ಸಮಾಧಿ ಗುಹೆ

Related Posts

ಇಂಡೋ-ಪಾಕ್ ಪ್ರೇಮ ಕಥೆ – ಪೋಲೀಸರ ಬಲೆಗೆ ಬಿದ್ದ ಇಕ್ರಾ-ಯಾದವ್ ಜೋಡಿ!

24/01/2023 : 1:32 PM

‘ಗೌಜಿ ಗಮ್ಮತ್‌’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ – ಶೀಘ್ರದಲ್ಲೇ ಸಿನಿಮಾ ಬೆಳ್ಳಿತೆರೆಗೆ!

19/01/2023 : 10:54 PM

ಆ ಸಂಭ್ರಮದ ದಿನಗಳು ಇನ್ನೆಲ್ಲಿ…

23/09/2022 : 10:11 PM

Comments are closed.

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.