ಮಂಜೇಶ್ವರ: ಇಲ್ಲಿನ ತಲಪಾಡಿ ಕೆ.ಸಿ.ರೋಡಿನಲ್ಲಿ ಡಿವೈಡರ್ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಕುಂಬಳೆಯ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಕುಂಬಳೆ ಕುಂಟಗೇರಡ್ಕದ ಕೆ.ಪ್ರಜಿತ್ (23) ಮತ್ತು ಕೃಷ್ಣ ಪ್ರಸಾದ್ (25) ಮೃತರು ಎಂದು ಗುರುತಿಸಲಾಗಿದೆ.
ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ಮರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಕೆ.ಸಿ. ರೋಡ್ ಸಮೀಪ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರಿಗೆ ಢಿಕ್ಕಿ ಹೊಡೆದು ಈ ಅಪಘಾತ ನಡೆದಿದೆ.