• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಪುತ್ತೂರು: ಸಿಂಗಾಣಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

    15/08/2022 : 11:10 AM

    ಮಂಗಳೂರಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ; ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    15/08/2022 : 10:19 AM

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಾಟಿಂಗ್ ಮಾಡುತ್ತಿದ್ದ ಯುವಕ – ಯುವತಿಯ ತೀವ್ರ ತಪಾಸಣೆ

    14/08/2022 : 7:01 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಆ ಸಂಭ್ರಮದ ದಿನಗಳು ಇನ್ನೆಲ್ಲಿ…

    23/09/2022 : 10:11 PM

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM
  • ಗ್ಯಾಲರಿ
CitizenLive News
Home » ಕರಾವಳಿ » ಮೂಡಬಿದಿರೆ: ಆರೋಪಿಯನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆಯೇ ಕೊಲೆ ಯತ್ನ
ಸಿ - ಸ್ಪೆಶಲ್

ಮೂಡಬಿದಿರೆ: ಆರೋಪಿಯನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆಯೇ ಕೊಲೆ ಯತ್ನ

News EditorBy News Editor14/08/2022 : 8:21 AMUpdated:14/08/2022 : 8:58 AM4 Comments2 Mins Read

ಮಂಗಳೂರು: ಬಂಧನ ವಾರಂಟ್‌ ಇರುವ ಆರೋಪಿಯೊಬ್ಬನನ್ನು ಬಂಧಿಸಲು ತೆರಳಿದ ವೇಳೆ ಆರೋಪಿಯ ತಂದೆ ಪೊಲೀಸರನ್ನು ಅವಾಚ್ಯವಾಗಿ ನಿಂದಿಸಿದ್ದಲ್ಲದೆ, ಆರೋಪಿ ಡ್ರ್ಯಾಗರ್‌ನಿಂದ ಇರಿದು ಕೊಲೆಗೆ ಯತ್ನಿಸಿ, ಜೀವಬೆದರಿಕೆ ಹಾಕಿದ ಘಟನೆ ಶುಕ್ರವಾರ ಮೂಡುಬಿದಿರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೊಹಮ್ಮದ್‌ ಫೈಜಲ್‌ ಯಾನೆ ಕ್ಯಾಬರೆ ಫೈಜಲ್‌ ಬಂಧಿತ ಆರೋಪಿ. ಮೂಡುಬಿದಿರೆ ಪೊಲೀಸ್‌ ಠಾಣೆಯ ನಾನಾ ಪ್ರಕರಣಗಳಲ್ಲಿ ತಲೆ ಮರೆಸಿಕೊಂಡಿದ್ದು, ಮೂಡುಬಿದಿರೆ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಿಂದ ಈತನ ವಿರುದ್ಧ ಬಂಧನ ವಾರಂಟ್‌ ಜಾರಿಯಲ್ಲಿತ್ತು. ಆರೋಪಿ ಆತನ ಮನೆಯಲ್ಲಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮೂಡುಬಿದಿರೆ ಠಾಣೆ ಎಎಸ್‌ಐ ರಾಜೇಶ್‌ ಮತ್ತು ಸಿಬ್ಬಂದಿ ಆತನನ್ನು ಬಂಧಿಸಲು ತೆರಳಿದ್ದರು.

ಮಧ್ಯಾಹ್ನ 2 ಗಂಟೆ ವೇಳೆಗೆ ಹಿದಾಯತ್‌ ನಗರದಲ್ಲಿರುವ ಆರೋಪಿಯ ಮನೆಗೆ ತೆರಳಿದ್ದು, ಆತನನ್ನು ವಶಕ್ಕೆ ಪಡೆಯಲು ಮುಂದಾದಾಗ ಮನೆಯಲ್ಲಿದ್ದ ಆತನ ತಂದೆ ಹಮೀದ್‌ ಎಂಬಾತನು ಮನೆಯ ಮುಂಭಾಗಿನಲ್ಲಿ ಅಡ್ಡವಾಗಿ ನಿಂತು ಪೊಲೀಸರನ್ನು ಹೀನಾಯವಾಗಿ ನಿಂದಿಸಿ, ಪೊಲೀಸರನ್ನು ಹಿಡಿದು ತಳ್ಳಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಈ ಸಂದರ್ಭ ಫೈಜಲ್‌ ಹಿಂಬಾಗಿಲಿನ ಮೂಲಕ ತಪ್ಪಿಸಲು ಯತ್ನಿಸಿದಾಗ ಕೂಡಲೇ ಪೊಲೀಸ್‌ ಕಾನ್‌ಸ್ಟೆಬಲ್‌ ಅಯ್ಯಪ್ಪ ಮನೆಯ ಹಿಂಬಾಗಿಲಿನ ಕಡೆ ಓಡಿ ಹೋಗಿ ಫೈಜಲ್‌ ತಪ್ಪಿಸಿಕೊಂಡು ಹೋಗದಂತೆ ಅಡ್ಡಲಾಗಿ ನಿಂತಿದ್ದಾರೆ.

ಈ ಸಂದರ್ಭ ಅಯ್ಯಪ್ಪನನ್ನು ಕೊಲೆ ಮಾಡಿ ತಪ್ಪಿಸಿಕೊಳ್ಳುವ ಉದ್ದೇಶದಿಂದ ತನ್ನ ಕೈಯಲ್ಲಿದ್ದ ಹರಿತವಾದ ಡ್ರ್ಯಾಗರ್‌ನಿಂದ ಹೊಟ್ಟೆಗೆ ತಿವಿಯಲು ಹೋಗಿದ್ದು, ಈ ಸಂದರ್ಭ ಅಯ್ಯಪ್ಪ ತಪ್ಪಿಸಿಕೊಂಡಿದ್ದು ಇದರಿಂದ ಬಲಗೈಗೆ ಗಾಯವಾಗಿದೆ. ಎಎಸ್‌ಐ ರಾಜೇಶ್‌ ಅವರು ಅಯ್ಯಪ್ಪ ಅವರ ಸಹಾಯಕ್ಕಾಗಿ ಓಡಿದಾಗ ಆರೋಪಿ ಫೈಜಲ್‌ ಅವರಿಗೂ ಡ್ರ್ಯಾಗರ್‌ ತೋರಿಸಿ ಕೊಲೆ ಬೆದರಿಕೆ ಹಾಕಿ ಮನೆಯ ಹಿಂಭಾಗದ ಹಾಡಿ ಪ್ರದೇಶಕ್ಕೆ ಓಡಿ ಹೋಗಿದ್ದಾನೆ.

ಘಟನೆಯ ಬಗ್ಗೆ ಮಾಹಿತಿ ಪಡೆದು ಪಿಎಸ್‌ಐಗಳಾದ ಸುದೀಪ್‌, ದಿವಾಕರ್‌ ಸೇರಿದಂತೆ ಹೆಚ್ಚಿನ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಗಾಗಿ ಶೋಧ ನಡೆಸಿದ್ದಾರೆ. ಈ ಸಂದರ್ಭ ಆರೋಪಿ ತೋಡಾರಿನ ಬದ್ರಿಯಾ ಸುನ್ನಿ ಜುಮ್ಮಾ ಮಸೀದಿ ಹಿಂಭಾಗದಲ್ಲಿರುವ ಹಾಡಿಯಲ್ಲಿ ಅವಿತು ಕುಳಿತಿರುವುದನ್ನು ಪತ್ತೆ ಹಚ್ಚಿ, ಆರೋಪಿಯನ್ನು ಡ್ರ್ಯಾಗರ್‌ ಸಹಿತ ಬಂಧಿಸಲಾಗಿದೆ. ಆರೋಪಿ ಫೈಜಲ್‌ ಮತ್ತು ಆತನ ತಂದೆ ಹಮೀದ್‌ ವಿರುದ್ಧ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಫೈಜಲ್‌ ವಿರುದ್ಧ ಮೂಡುಬಿದಿರೆ, ವೇಣೂರು, ಬಜಪೆ, ಮಂಗಳೂರು ಗ್ರಾಮಾಂತರ, ಲಿಂಗದಹಳ್ಳಿ, ಅಜೆಕಾರು ಸೇರಿದಂತೆ ನಾನಾ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈತನ ಬಂಧನಕ್ಕೆ ಹಲವು ಸಮಯದಿಂದ ಪೊಲೀಸರು ಬಲೆ ಬೀಸಿದ್ದರು.

Share. Facebook Twitter Pinterest LinkedIn Tumblr Email
Previous Articleಮಂಗಳೂರಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ತಿರಂಗಾ ಯಾತ್ರೆ
Next Article ಸ್ವಾತಂತ್ರ್ಯದ ಅಮೃತ ಮಹೋತ್ಸವ; ಮೆಟ್ರೋದಲ್ಲಿ ಉಚಿತ ಪ್ರಯಾಣ

Related Posts

ಇಂಡೋ-ಪಾಕ್ ಪ್ರೇಮ ಕಥೆ – ಪೋಲೀಸರ ಬಲೆಗೆ ಬಿದ್ದ ಇಕ್ರಾ-ಯಾದವ್ ಜೋಡಿ!

24/01/2023 : 1:32 PM

‘ಗೌಜಿ ಗಮ್ಮತ್‌’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ – ಶೀಘ್ರದಲ್ಲೇ ಸಿನಿಮಾ ಬೆಳ್ಳಿತೆರೆಗೆ!

19/01/2023 : 10:54 PM

ಆ ಸಂಭ್ರಮದ ದಿನಗಳು ಇನ್ನೆಲ್ಲಿ…

23/09/2022 : 10:11 PM

4 Comments

  1. zorivareworilon on 21/08/2022 : 11:06 AM 11:06 AM

    Thanks for every other informative blog. Where else could I get that kind of info written in such a perfect method? I have a mission that I’m just now working on, and I have been at the look out for such information.

  2. try these out on 27/08/2022 : 2:41 PM 2:41 PM

    Magnificent goods from you, man. I have be mindful your stuff previous to and you’re just extremely great. I really like what you have received here, really like what you are saying and the best way by which you say it. You are making it enjoyable and you still care for to keep it wise. I can’t wait to read far more from you. This is really a wonderful web site.

  3. their explanation on 27/08/2022 : 4:20 PM 4:20 PM

    What i don’t understood is actually how you’re now not actually much more smartly-liked than you might be now. You’re very intelligent. You realize therefore considerably relating to this topic, made me personally believe it from so many numerous angles. Its like men and women don’t seem to be involved unless it is something to accomplish with Lady gaga! Your individual stuffs excellent. All the time deal with it up!

  4. Ghostwriting Erfahrungen on 27/08/2022 : 5:38 PM 5:38 PM

    ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ತ್ರಿವರ್ಣ ಧ್ವಜ ಹಾರಾಡುತ್ತಿದೆ – ಮೋದಿ

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.