ಮಂಗಳೂರು: ವಿಹಿಂಪ ನಾಯಕ ಶರಣ್ ಪಂಪ್ವೆಲ್ ಬಿರುವೆರ್ ಕುಡ್ಲ ಸಂಘಟನೆಯ ವಿರುದ್ದ ಹೇಳಿಕೆ ನೀಡಿದ ಬೆನ್ನಲ್ಲೇ ಬಿರುವೆರ್ ಕುಡ್ಲ ಸಂಘಟನೆ ಪತ್ರಿಕಾಗೋಷ್ಠಿ ಕರೆದು ಶರಣ್ ವಿರುದ್ದ ಕಿಡಿಕಾರಿದೆ.

ಮಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿರುವೆರ್ ಕುಡ್ಲದ ಸಂಚಾಲಕ ಲಕ್ಷ್ಮೀಶ್ ಈ ಹಿಂದೆ ನಡೆದ ಸಭೆಯೊಂದರಲ್ಲಿ ಶರಣ್ ಪಂಪ್ವೆಲ್ ಬಿರುವೆರ್ ಕುಡ್ಲ ಒಂದು ಜಾತಿಗೆ ಸೀಮಿತವಾಗಿದೆ ಎಂದಿದ್ದರು. ಬಿರುವೆರ್ ಕುಡ್ಲ ಸಮಾಜ ಸೇವೆಗಾಗಿ ಹುಟ್ಟಿಕೊಂಡ ಸಂಸ್ಥೆಯಾಗಿದೆ. ಏಳು ವರ್ಷಗಳಿಂದ ಸಂಸ್ಥೆಯು ಬಡವರಿಗೆ ಜಾತಿ ಭೇದ ನೋಡದೆ ಮೂರೂವರೆ ಕೋಟಿ ರೂ.ಗಳ ಸಹಾಯ ಮಾಡಿದೆ ಎಂದರು.
ಬಿರುವೆರ್ ಕುಡ್ಲದ ದೀಪು ಶೆಟ್ಟಿಗಾರ್ ಮಾತನಾಡಿ ನಾನು ಬಿಲ್ಲವ ಅಲ್ಲ ಆದರೆ ಸಂಘಟನೆಯ ಉತ್ತಮ ಕೆಲಸ ನೋಡಿ ಹೋದವ. ಸಂಘಟನೆಗೆ ಜನ ಬೇಕು ಅಂತ ಓಡೋದಿಲ್ಲ ಜನರೇ ಬಿರುವೆರ್ ಕುಡ್ಲದ ಹಿಂದೆ ಬರ್ತಾರೆ ಎಂದರು. ದುಡ್ಡು ಮತ್ತು ಜಾತಿಯ ಹಿಂದೆ ಹೋದರೆ ಯಾವಾ ಸಂಘಟನೆಗೆ ಜನ ಕಡಿಮೆ ಆಗಬಹುದು ಯೋಚಿಸಿ ಎಂದು ಶರಣ್ ಪಂಪ್ವೆಲ್ ಗೆ ಉತ್ತರ ಕೊಟ್ಟರು.
ಇವರು ಸಿಟಿ ಸೆಂಟರ್ ಸಹಿತ ಹಲವು ಮುಸ್ಲಿಮರ ಮಾಲ್’ಗಳ ಭದ್ರತೆಯ ಗುತ್ತಿಗೆ ಪಡೆದು ಸಾಕಷ್ಟು ಹಣ ಸಂಪಾದಿಸುತ್ತಿದ್ದಾರೆ. ಹಿಂದುತ್ವದ ಹೆಸರಿನಲ್ಲಿ ಹೋರಾಟ ಮಾಡುವ ಅವರಿಗೆ ಮುಸ್ಲಿಮರ ಸಂಸ್ಥೆಯ ಹಣವಾಗುತ್ತದೆ, ಆದರೆ ಮುಸ್ಲಿಂ ಯುವಕರು ಬೇಡವಾಗಿದೆ ಎಂದು ಜನ ಮಾತನಾಡಿಕೊಳ್ತಿದ್ದಾರೆ. ಇದು ಎಷ್ಟು ಸರಿ ಶರಣ್ ಪಂಪ್ವೆಲ್ ಅವರೇ ಎಂದು ದೀಪು ಶೆಟ್ಟಿಗಾರ್ ಪ್ರಶ್ನಿಸಿದರು.
ಬಿರುವೆರ್ ಕುಡ್ಲ ಸಂಘಟನೆಯಲ್ಲಿ ಶರಣ್ ಪಂಪ್ವೆಲ್ ಕ್ಷಮೆಯಾಚಿಸಬೇಕೆಂದು ಸಂಘಟನೆಯ ಪ್ರಮುಕರು ಒತ್ತಾಯಿಸಿದ್ದಾರೆ ಸುದ್ದಿಗೋಷ್ಠಿಯಲ್ಲಿ ಕಿಶೋರ್ ಬಾಬು, ವಿದ್ಯಾ, ರಾಕೇಶ್, ಉದಯ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.