• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಪುತ್ತೂರು: ಸಿಂಗಾಣಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

    15/08/2022 : 11:10 AM

    ಮಂಗಳೂರಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ; ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    15/08/2022 : 10:19 AM

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಾಟಿಂಗ್ ಮಾಡುತ್ತಿದ್ದ ಯುವಕ – ಯುವತಿಯ ತೀವ್ರ ತಪಾಸಣೆ

    14/08/2022 : 7:01 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಆ ಸಂಭ್ರಮದ ದಿನಗಳು ಇನ್ನೆಲ್ಲಿ…

    23/09/2022 : 10:11 PM

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM
  • ಗ್ಯಾಲರಿ
CitizenLive News
Home » ಕರಾವಳಿ » ಅಸನಿ ಚಂಡಮಾರುತ ಎಫೆಕ್ಟ್; ಮಲ್ಪೆ ಬೀಚ್‌ನ ತೇಲುವ ಸೇತುವೆಗೆ ಹಾನಿ
ಕರಾವಳಿ

ಅಸನಿ ಚಂಡಮಾರುತ ಎಫೆಕ್ಟ್; ಮಲ್ಪೆ ಬೀಚ್‌ನ ತೇಲುವ ಸೇತುವೆಗೆ ಹಾನಿ

News EditorBy News Editor09/05/2022 : 11:36 AMUpdated:09/05/2022 : 11:36 AM1 Comment1 Min Read

ಉಡುಪಿ: ಅಸನಿ ಚಂಡಮಾರುತ ಪರಿಣಾಮ ಮಲ್ಪೆಯಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಬೃಹತ್ ಅಲೆಗಳಿಂದಾಗಿ ನಾಲ್ಕು ದಿನಗಳ ಹಿಂದೆ ಬೀಚ್‌ನಲ್ಲಿ ಅಳವಡಿಸಲಾದ ತೇಲುವ ಸೇತುವೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

ಬೃಹತ್ ಅಲೆಗಳ ಕಾರಣಕ್ಕಾಗಿ ರವಿವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಬೀಚ್‌ನಲ್ಲಿ ವಾಟರ್ ಸ್ಪೋರ್ಟ್ಸ್ ಹಾಗೂ ತೇಲುವ ಸೇತುವೆ ಪ್ರವೇಶವನ್ನು ಸ್ಥಗಿತಗೊಳಿಸಲಾಗಿತ್ತು. ರಾತ್ರಿ ಸಮುದ್ರ ಇನ್ನಷ್ಟು ಪ್ರಕ್ಷುಬ್ಧಗೊಂಡಿದ್ದು, ರಕ್ಕಸ ಗಾತ್ರದ ಅಲೆಗಳು ತೀರ ಅಪ್ಪಳಿಸುತ್ತಿದ್ದವು. ಇದರ ಪರಿಣಾಮವಾಗಿ ತೇಲುವ ಸೇತುವೆಯು ಛಿದ್ರಗೊಂಡು ಸಮುದ್ರಪಾಲಾಗಿದೆ. ಸೇತುವೆಯ ಬಿಡಿಭಾಗಗಳು ಸಮುದ್ರದಲ್ಲಿ ತೇಲುವ ದೃಶ್ಯಗಳು ಕಂಡುಬಂದಿವೆ. ಇದನ್ನು ಮರು ಜೋಡಿಸುವ ಕಾರ್ಯ ಇದೀಗ ನಡೆಯುತ್ತಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಸದ್ಯಕ್ಕೆ ಮಲ್ಪೆ ಬೀಚ್‌ನಲ್ಲಿನ ವಾಟರ್ ಸ್ಪೋರ್ಟ್ಸ್ ಹಾಗೂ ತೇಲುವ ಸೇತುವೆ ಪ್ರವೇಶವನ್ನು ಸ್ಥಗಿತಗೊಳಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಲ್ಪೆ ಬೀಚ್ ಉಸ್ತುವಾರಿ ಸುದೇಶ್ ಶೆಟ್ಟಿ, ಚಂಡಮಾರುತದ ಪರಿಣಾಮ ಭಾರೀ ಗಾತ್ರದ ಅಲೆಗಳಿಂದ ಸೇತುವೆಗೆ ಅಲ್ಪ ಪ್ರಮಾಣದಲ್ಲಿ ಹಾನಿಯಾಗಿವೆ. ಸೇತುವೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಸೇತುವೆ ಸಂಪೂರ್ಣ ಸುರಕ್ಷತೆಯಿಂದ ಕೂಡಿದೆ. ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಪಚಾರ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಚಂಡಮಾರುತ ಕಾರಣಕ್ಕಾಗಿ ರವಿವಾರವೇ ನಾವು ಎಲ್ಲವನ್ನು ಸಂಪೂರ್ಣ ಬಂದ್ ಮಾಡಿದ್ದೇವೆ. ರವಿವಾರ ಸಂಜೆಯಿಂದ ಇಂದು ಮತ್ತು ನಾಳೆ ಕೂಡ ವಾಟರ್ ಸ್ಪೋರ್ಟ್ಸ್, ಸೈಂಟ್ ಮೇರಿಸ್ ದ್ವೀಪದ ಬೋಟು, ತೇಲುವ ಸೇತುವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ತಿಳಿಸಿದರು.

Share. Facebook Twitter Pinterest LinkedIn Tumblr Email
Previous Articleನೆರೆಮನೆಯವನಿಂದ ಪ್ರೀತಿಸುವಂತೆ ಕಿರುಕುಳ; ಮನನೊಂದು ಯುವತಿ ಆತ್ಮಹತ್ಯೆ
Next Article ಮಂಗಳೂರು: ಮೂಡುಶೆಡ್ಡೆ ಮಸೀದಿ ಬಳಿ ಮೊಳಗಿದ ಕೊರಗಜ್ಜನ ಭಕ್ತಿಗೀತೆ

Related Posts

ಇಂಡೋ-ಪಾಕ್ ಪ್ರೇಮ ಕಥೆ – ಪೋಲೀಸರ ಬಲೆಗೆ ಬಿದ್ದ ಇಕ್ರಾ-ಯಾದವ್ ಜೋಡಿ!

24/01/2023 : 1:32 PM

‘ಗೌಜಿ ಗಮ್ಮತ್‌’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ – ಶೀಘ್ರದಲ್ಲೇ ಸಿನಿಮಾ ಬೆಳ್ಳಿತೆರೆಗೆ!

19/01/2023 : 10:54 PM

ಆ ಸಂಭ್ರಮದ ದಿನಗಳು ಇನ್ನೆಲ್ಲಿ…

23/09/2022 : 10:11 PM

1 Comment

  1. Jebnfadia on 10/05/2022 : 12:24 AM 12:24 AM

    u.s online pharmacy buy online pharmacy uk

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.