• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಪುತ್ತೂರು: ಸಿಂಗಾಣಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

    15/08/2022 : 11:10 AM

    ಮಂಗಳೂರಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ; ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    15/08/2022 : 10:19 AM

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಾಟಿಂಗ್ ಮಾಡುತ್ತಿದ್ದ ಯುವಕ – ಯುವತಿಯ ತೀವ್ರ ತಪಾಸಣೆ

    14/08/2022 : 7:01 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಆ ಸಂಭ್ರಮದ ದಿನಗಳು ಇನ್ನೆಲ್ಲಿ…

    23/09/2022 : 10:11 PM

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM
  • ಗ್ಯಾಲರಿ
CitizenLive News
Home » ರಾಷ್ಟ್ರೀಯ » ಏಕದಾಂಪತ್ಯ; ದೇವಸ್ಥಾನದಲ್ಲಿ ವಿವಾಹಕ್ಕೆ ಅವಕಾಶವಿಲ್ಲವೆಂದ ಬಿಜೆಪಿ!
ರಾಷ್ಟ್ರೀಯ

ಏಕದಾಂಪತ್ಯ; ದೇವಸ್ಥಾನದಲ್ಲಿ ವಿವಾಹಕ್ಕೆ ಅವಕಾಶವಿಲ್ಲವೆಂದ ಬಿಜೆಪಿ!

News EditorBy News Editor04/06/2022 : 1:54 PMUpdated:04/06/2022 : 1:54 PMNo Comments1 Min Read

ವಡೋದರ: ಏಕದಾಂಪತ್ಯ ನಿರ್ಧಾರ ಮಾಡಿರುವ ವಡೋದರದ ಯುವತಿ ಕ್ಷಮಾ ಬಿಂಧು ನಿರ್ಧಾರ ಹುಚ್ಚುತನದ್ದು ಎಂದು ಟೀಕಿಸಿರುವ ಬಿಜೆಪಿ ಮುಖಂಡರು, ಆಕೆ ದೇವಸ್ಥಾನದಲ್ಲಿ ಮದುವೆಯಾಗಲು ಬಿಡುವುದಿಲ್ಲ ಎಂದು ಘೋಷಿಸಿದ್ದಾರೆ.

ಸಮಾಜಶಾಸ್ತ್ರದಲ್ಲಿ ಪದವಿ ಪಡೆದು ಖಾಸಗಿ ಕಂಪೆನಿಯಲ್ಲಿ ಹಿರಿಯ ನೇಮಕಾತಿ ಅಧಿಕಾರಿಯಾಗಿ ಕೆಲಸ ಮಾಡುತ್ತಿರುವ ಕ್ಷಮಾರ ತಂದೆ ದಕ್ಷಿಣ ಆಫ್ರಿಕಾದಲ್ಲಿ ಇಂಜಿನಿಯರ್ ಆಗಿದ್ದು, ತಾಯಿ ಅಹಮದಾಬಾದ್‍ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಪ್ರತಿಯೊಂದು ಹುಡುಗಿಗೂ ತನ್ನ ಮದುವೆಯ ಬಗ್ಗೆ ಕನಸುಗಳು ಇರುತ್ತವೆ. ವರ ಕುದುರೆಯ ಮೇಲೆ ಬಂದು ಆಕೆಯನ್ನು ಕರೆದುಕೊಂಡು ಹೋಗಬೇಕು ಎಂಬ ನಾನಾ ರೀತಿಯ ಕಲ್ಪನೆಗಳಿರುತ್ತವೆ. ಆದರೆ ಕ್ಷಮಾ ಭಿನ್ನವಾದ ಆಲೋಚನೆ ಹೊಂದಿದ್ದಾಳೆ. ಅಂದರೆ ಆಕೆ ಬೇರೆಯವರನ್ನು ಮದುವೆಯಾಗಲು ಇಷ್ಟ ಪಟ್ಟಿಲ್ಲ. ಬದಲಾಗಿ ತನ್ನಲ್ಲೇ ತನ್ನ ವರನನ್ನು ಕಂಡುಕೊಂಡಿದ್ದಾಳೆ. ಬಹಳ ದಿನಗಳಿಂದ ತನ್ನಲ್ಲೇ ಉಳಿದುಕೊಂಡಿದ್ದ ಆಲೋಚನೆಗಳನ್ನು ಜಾರಿಗೆ ತರಲು ಅಂಜಿ ಮೌನವಾಗಿದ್ದಳು. ಅಂತಿಮವಾಗಿ ದೃಢ ನಿರ್ಧಾರ ಮಾಡಿ ಏಕದಾಂಪತ್ಯ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದಾಳೆ. ಅಂತಿಮವಾಗಿ ಜೂನ್ 11ರಂದು ವಡೋದರದ ದೇವಸ್ಥಾನದಲ್ಲಿ ಎಲ್ಲಾ ಸಂಪ್ರದಾಯಗಳ ಪ್ರಕಾರ ಮದುವೆಯಾಗಲು, ಗೋವಾಕ್ಕೆ ಮಧುಚಂದ್ರಕ್ಕೆ ಹೋಗಲು ನಿರ್ಧರಿಸಿದ್ದಾರೆ.

ಆಕೆಯ ನಿರ್ಧಾರ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿಯ ಅಹಮದಾಬಾದ್‍ನ ಬಿಜೆಪಿ ನಗರ ಘಟಕದ ಅಧ್ಯಕ್ಷೆ ಸುನೀತಾ ಶುಕ್ಲಾ ಯುವತಿಯ ನಿರ್ಧಾರವನ್ನು ವಿರೋಧಿಸಿದ್ದಾರೆ. ಆಕೆ ನಿರ್ಧಾರ ಹುಚ್ಚುತನದ್ದು, ಮದುವೆಯಾಗಲು ದೇವಸ್ಥಾನವನ್ನು ಆಯ್ಕೆ ಮಾಡಿಕೊಂಡಿರುವ ಆಕೆಯ ನಿರ್ಧಾರವನ್ನು ನಾನು ವಿರೋಧಿಸುತ್ತೇನೆ. ಆಕೆ ಹಿಂದು ಧರ್ಮದ ವಿರುದ್ಧವಾಗಿ ಯಾವುದೇ ಕ್ರಮಕ್ಕೆ ಮುಂದಾದರೂ ನಾವು ವಿರೋಧಿಸುತ್ತೇನೆ. ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.

ಹಿಂದು ಧರ್ಮದಲ್ಲಿ ಏಕದಾಂಪತ್ಯ ಪದ್ಧತಿಗೆ ಅವಕಾಶ ಇಲ್ಲ. ಯುವಕ-ಯುವಕನನ್ನೇ, ಯುವತಿ ಯುವತಿಯನ್ನೇ ಮದುವೆಯಾಗಲು ಅವಕಾಶ ಇಲ್ಲ. ಅನ್ಯಲಿಂಗ ದಾಂಪತ್ಯ ರೂಢಿ, ಸಂಪ್ರದಾಯವಾಗಿದೆ. ಕ್ಷಮಾಳ ರೀತಿ ಏಕದಾಂಪತ್ಯಕ್ಕೆ ಮುಂದಾದರೆ ಹಿಂದುಗಳ ಜನಸಂಖ್ಯೆ ಕಡಿಮೆಯಾಗಲಿದೆ ಎಂದು ಆತಂಕ ವ್ಯಕ್ತ ಪಡಿಸಿದ್ದಾರೆ.

Share. Facebook Twitter Pinterest LinkedIn Tumblr Email
Previous Articleಸುವರ್ಣ ಸೌಧದಲ್ಲಿ ಶಾವಿಗೆ ಒಣಗಿಸಿ ಸಸ್ಪೆಂಡ್ ಆಗಿದ್ದ ಮಲ್ಲವ್ವಗೆ ಮರಳಿ ಕೆಲಸ!
Next Article  ಡ್ರಗ್ಸ್​ ಪಾರ್ಟಿ; ಬಾಲಿವುಡ್​ ನಟ ಶಕ್ತಿ ಕಪೂರ್ ಮಗ ಸಿದ್ಧಾಂತ್​ ಕಪೂರ್​​ ಬಂಧನ!

Related Posts

ಇಂಡೋ-ಪಾಕ್ ಪ್ರೇಮ ಕಥೆ – ಪೋಲೀಸರ ಬಲೆಗೆ ಬಿದ್ದ ಇಕ್ರಾ-ಯಾದವ್ ಜೋಡಿ!

24/01/2023 : 1:32 PM

‘ಗೌಜಿ ಗಮ್ಮತ್‌’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ – ಶೀಘ್ರದಲ್ಲೇ ಸಿನಿಮಾ ಬೆಳ್ಳಿತೆರೆಗೆ!

19/01/2023 : 10:54 PM

ಆ ಸಂಭ್ರಮದ ದಿನಗಳು ಇನ್ನೆಲ್ಲಿ…

23/09/2022 : 10:11 PM

Comments are closed.

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.