ನವದೆಹಲಿ: ಬಿಜೆಪಿ ಸಂಸದ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ತಮ್ಮ ಪ್ರತಿಷ್ಠಾನದ ಮೂಲಕ ದೆಹಲಿಯ ಕೋವಿಡ್ ಸೋಂಕಿತರಿಗೆ ಉಚಿತವಾಗಿ ಆಂಟಿ-ವೈರಲ್ ಡ್ರಗ್ ಫ್ಯಾಬಿಫ್ಲೂ ಮತ್ತು ಆಮ್ಲಜನಕ ಸಿಲಿಂಡರ್ಗಳನ್ನು ವಿತರಿಸಲಿದ್ದೇವೆ ಎಂದು ತಿಳಿಸಿದ್ದಾರೆ.
ದೆಹಲಿ ನನ್ನ ಮನೆ, ನನ್ನ ಕೊನೆಯ ಉಸಿರು ಇರುವ ತನಕ ಜನರ ಸೇವೆಯನ್ನು ಮಾಡುತ್ತೇನೆ. ಆಕ್ಸಿಜನ್, ಬೆಡ್ ಮತ್ತು ಔಷಧ ಸಹಾಯ ಮಾಡಿ ಎಂದು ಹಲವರು ಮನವಿ ಮಾಡಿದ್ದಾರೆ. ನನಗೆ ಸಾಧ್ಯವಾದಷ್ಟು ಸಹಾಯವನ್ನು ಮಾಡುತ್ತೇನೆ. ಕೊರೊನಾ ಸೋಂಕಿತರು ಆಕ್ಸಿಜನ್ ಫ್ಯಾಬಿಫ್ಲೂ, ಔಷಧಗಳನ್ನು ಪಡೆಯಲು ಆಧಾರ್ ಕಾರ್ಡ್ ಜೊತೆಗೆ ಬರಬೇಕು ಎಂದು ಸೂಚನೆ ನೀಡಲಾಗಿದೆ. ಕೊರೊನಾ ಸೊಂಕಿತರಿಗೆ ಉಚಿತವಾಗಿ ವೈದ್ಯಕೀಯ ಅಗತ್ಯತೆಯನ್ನು ಪೂರೈಸಲು ಗೌತಮ್ ಗಂಭೀರ್ ಮುಂದಾಗಿದ್ದಾರೆ.
ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಿರುವ ಲಾಕ್ಡೌನ್ಅನ್ನು ದೆಹಲಿಯಲ್ಲಿ ಇನ್ನು ಒಂದು ವಾರಗಳ ಕಾಲ ಮುಂದುವರಿಸಲಿದ್ದೇವೆ. ದೆಹಲಿಯಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಆವಶ್ಯಕತೆ ಇದೆ. ಕೋವಿಡ್ ಹೋರಾಟವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಿಗೆ ನಿಂತು ಎದುರಿಸುತ್ತಿದ್ದೇವೆ. ದೆಹಲಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಆಕ್ಸಿಜನ್ ಸಮಸ್ಯೆ ಎದುರಾಗಿದ್ದು ರಾಜ್ಯಗಳು ಆಕ್ಸಿಜನ್ ನೀಡಬೇಕೆಂದು ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.